ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ ಎರಡೂವರೆ ತಿಂಗಳು ಆಗಿಬರುತ್ತಿದೆ. ಇನ್ನು ಇದೇ ಮೊದಲ ಬಾರಿಗೆ ಜೈಲಿನಲ್ಲಿ ದರ್ಶನ್ ಇರುವ ಮೊದಲ ಫೋಟೋ ಬಿಡುಗಡೆಯಾಗಿದೆ.
ಸ್ಪೇಷಲ್ ಬ್ಯಾರಕ್ ಹೊರಗೆ ನಟ ದರ್ಶನ್ ಕುಳಿತಿರುವ ಫೋಟೋ ವೈರಲ್ ಆಗಿದೆ. ರೌಡಿ ವಿಲ್ಸನ್ ಗಾರ್ಡನ್ ನಾಗ, ರೇಣುಕಾಸ್ವಾಮಿ ಕೊಲೆ ಪ್ರಕರಣದ 11ನೇ ಆರೋಪಿ ನಾಗರಾಜ್ ಜೊತೆ ದರ್ಶನ್ ಕುಳಿತಿದ್ದಾರೆ. ಎರಡು ದಿನಗಳ ಹಿಂದೆ ಸಿಸಿಬಿ ದಾಳಿ ಮಾಡಿದ್ದ ಸಂದರ್ಭದಲ್ಲಿ ಈ ಫೋಟೋ ತೆಗೆಯಲಾಗಿತ್ತು.
ಫೋಟೋದಲ್ಲಿ ನಟ ದರ್ಶನ್ ಕೈಯಲ್ಲಿ ಸಿಗರೇಟು ಮತ್ತು ಕಾಫಿ ಮಗ್ ಹಿಡಿದುಕೊಂಡಿರುವುದು ಕಾಣಬಹುದು.